December 12, 2025
Breaking News

ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಪಿ.ಎನ್. ಗೌಡರ್ ಆತ್ಮಹತ್ಯೆ

Spread the love

ಚನ್ನಗಿರಿ :

ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ಗುತ್ತಿಗೆದಾರ ಪಿ.ಎನ್. ಗೌಡರ್ (54) ಮೇ.26ರಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಗೌಡ ಅವರು ಡೆತ್ ನೋಟ್ ಬರೆದಿಟ್ಟು ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡಿದ್ದಾರೆ. ಡೆತ್ ನೋಟ್‌ನಲ್ಲಿ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದಿಂದ ಬಾಕಿ ಬಿಲ್‌ ಪಾವತಿಮಾಡದೆ ಅಧಿಕಾರಿಗಳು ಕಿರುಕುಳ ನೀಡುತ್ತಿರುವ ಕಾರಣ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ಬರೆದಿದ್ದಾರೆ.

ಗೌಡರ್‌ ಅವರು ಬಾಕಿ ಬಿಲ್ ಪಾವತಿಗಾಗಿ ಹಲವು ಬಾರಿ ಅಧಿಕಾರಿಗಳನ್ನು ಸಂಪರ್ಕಿಸಿದ್ದರೂ ಯಾವುದೇ ಪ್ರಗತಿ ಆಗದೆ, ಅವರು ಕಿರುಕುಳಕ್ಕೆ ತೀವ್ರ ನೊಂದು ಹೋಗಿದ್ದರು. ಅವರ ಈ ನಿರ್ಣಯ ಕುಟುಂಬದ ಸದಸ್ಯರ ನಡುವೆ ಆಘಾತ ಮೂಡಿಸಿದೆ.

ಈ ಸಂಬಂಧ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 306ರಡಿ (ಆತ್ಮಹತ್ಯೆಗೆ ಪ್ರೇರಣೆ) ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಈ ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಈ ಘಟನೆ ಗುತ್ತಿಗೆದಾರರ ಜೀವನದ ಕಠಿಣ ಸತ್ಯವನ್ನು ಪ್ರತಿಬಿಂಬಿಸುತ್ತದೆ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವು ಎಂತಹ ದುರ್ಭಾಗ್ಯಕರ ಘಟನಗಳಿಗೆ ಕಾರಣವಾಗಬಹುದು ಎಂಬುದನ್ನು ತೋರಿಸುತ್ತದೆ. ಗೌಡ ರ ನಿಧನವು ಅವರ ಕುಟುಂಬ ಮತ್ತು ಸ್ಥಳೀಯ ಸಮುದಾಯಕ್ಕೆ ಅಪಾರ ದುಃಖವನ್ನುಂಟುಮಾಡಿದೆ.

WhatsApp Image 2025-06-21 at 19.57.59