February 12, 2026
Breaking News

ಜಿಲ್ಲಾನಾಯಕ ಸಮುದಾಯದ ಪ್ರತಿಭಟನೆಯನ್ನು ಬೆಂಬಲಿಸಿ.!

Spread the love

ಚಿತ್ರದುರ್ಗ:
ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಗೋಲ್‌ಮಾಲ್ ಸಂಬಂಧಿಸಿದಂತೆ, ಸ್ವತಃ ಹಣಕಾಸು ಖಾತೆ ಹೊಂದಿರುವ ಸಿ.ಎಂ ಸಿದ್ದರಾಮಯ್ಯ ನೇರ ಹೊಣೆ ಹೊತ್ತಿದ್ದು, ಅವರ ರಾಜೀನಾಮೆಗೆ ಒತ್ತಾಯಿಸಿ ಜೂನ್ 28ರಂದು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಯಲಿದ್ದು, ತಾಲ್ಲೂಕಿನ ಸಮಸ್ತ ನಾಯಕ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮೊಳಕಾಲ್ಮೂರು ಮಾಜಿ ಶಾಸಕರಾದ ತಿಪ್ಪೇಸ್ವಾಮಿ ಕರೆ ನೀಡಿದ್ದಾರೆ.

ಹಿರಿಯೂರಿನ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪ್ರತಿಭಟನಾ ಪೂರ್ವಭಾವಿ ಸಭೆಯಲ್ಲಿ ತಿಪ್ಪೇಸ್ವಾಮಿ ಮಾತನಾಡುತ್ತಾ, “ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ ಆರ್ಥಿಕ ಅಕ್ರಮವು ನಮಗೆಲ್ಲರಿಗೂ ತೀವ್ರ ಸಂಕಟವನ್ನುಂಟು ಮಾಡಿದೆ. ಮುಖ್ಯಮಂತ್ರಿಗಳ ರಾಜೀನಾಮೆ ಮಾಡಿಸಿ, ಈ ಅಕ್ರಮದ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರ ಒತ್ತಡಕ್ಕೆ ಒಳಪಡಬೇಕು” ಎಂದು ಹೇಳಿದರು.

ಈ ಸಂಧರ್ಭದಲ್ಲಿ, ನೂರಾರು ನಾಯಕರ ಸಮ್ಮುಖದಲ್ಲಿ, ತಿಪ್ಪೇಸ್ವಾಮಿ, “ನಮ್ಮ ಸಮಾಜದ ಹಕ್ಕುಗಳನ್ನು ಕಾಪಾಡಲು ಮತ್ತು ನ್ಯಾಯಕ್ಕಾಗಿ ಹೋರಾಡಲು, ನಾವು ಎಲ್ಲರೂ ಒಗ್ಗಟ್ಟಿನಿಂದ ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕು” ಎಂದು ಮನವಿ ಮಾಡಿದರು.

ಈ ಪ್ರತಿಭಟನೆಗೆ ಜಿಲ್ಲಾ ನಾಯಕ ಸಮುದಾಯದ ಬಂಧುಗಳು, ತೀವ್ರ ಪ್ರತಿಸ್ಪಂದನೆ ನೀಡಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. “ನಾಯಕ ಸಮಾಜದ ಧ್ವನಿಯನ್ನು ಮುಚ್ಚಲು ಯಾರಿಗೂ ಅವಕಾಶ ನೀಡಬಾರದು” ಎಂದು ತಿಪ್ಪೇಸ್ವಾಮಿ ಹೇಳಿದರು.

ತಮಗೆ ನ್ಯಾಯ ದೊರಕಿಸಿಕೊಳ್ಳಲು ಈ ಪ್ರತಿಭಟನೆ ಒಂದು ಸಶಕ್ತ ವೇದಿಕೆ ಎಂಬುದಾಗಿ ತಿಪ್ಪೇಸ್ವಾಮಿ ತಿಳಿಸಿದರು. “ಎಲ್ಲರಿಗೂ ನ್ಯಾಯ ದೊರಕಲು ನಾವು ನಿರಂತರ ಹೋರಾಟ ಮುಂದುವರಿಸಬೇಕು” ಎಂದು ಅವರು ಕರೆ ನೀಡಿದರು.

WhatsApp Image 2025-06-21 at 19.57.59