March 3, 2026
Spread the love

ತುಮಕೂರು

ತಾಲ್ಲೂಕು ಹೆಗ್ಗೆರೆ ಗ್ರಾಮ ಪಂಚಾಯಿತಿಯ ಹೆಗ್ಗೆರೆ ಗ್ರಾಮದ ದಲಿತ ಕಾಲೋನಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೆ.ಡಿ.ಎಸ್.ಎಸ್) ಮುಖಂಡ ಶ್ರೀನಿವಾಸ ಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಗ್ರಾಮದಲ್ಲಿ ಆದಿ ದ್ರಾವಿಡ ಮತ್ತು ಆದಿ ಕರ್ನಾಟಕ ಜನಾಂಗಕ್ಕೆ ಶವ ಸಂಸ್ಕಾರ ಮಾಡಲು ರುದ್ರಭೂಮಿ ಇಲ್ಲದಿರುವುದರಿಂದ ಇದಕ್ಕೆ ಮನವಿ ಮಾಡಲಾಯಿತು. 1500 ಜನ ವಾಸಿಸುತ್ತಿರುವ ಈ ಗ್ರಾಮದಲ್ಲಿ ಶವ ಸಂಸ್ಕಾರ ಮಾಡಲು ಸ್ಥಳಾವಕಾಶವಿಲ್ಲದ ಕಾರಣದಿಂದ ಕೆರೆ ಅಂಗಳದಲ್ಲಿ ತಾತ್ಕಾಲಿಕವಾಗಿ ಶವ ಸಂಸ್ಕಾರ ಮಾಡುತ್ತಿದ್ದು, ಇದಕ್ಕೆ ರಸ್ತೆಯ ಸಹ ಇಲ್ಲ ಎಂದು ಗ್ರಾಮದ ಜನತೆ ತಮ್ಮ ಸಮಸ್ಯೆಗಳನ್ನು ವ್ಯಕ್ತಪಡಿಸಿದರು.

ಶವ ಸಂಸ್ಕಾರಕ್ಕಾಗಿ ಸ್ಥಳೀಯ ಜನತೆ ಪಿಡುಗು ಎದುರಿಸುತ್ತಿದ್ದು, ಈ ಸಮಸ್ಯೆಗೆ ಶೀಘ್ರ ಪರಿಹಾರಕ್ಕಾಗಿ ಕೆ.ಡಿ.ಎಸ್.ಎಸ್. ಮುಖಂಡರು ಪ್ರತಿಭಟನೆ ನಡೆಸಿದರು. ಗ್ರಾಮದ ಜನರಿಗೆ ಸೂಕ್ತ ರುದ್ರಭೂಮಿ ಹಾಗೂ ಮೂಲಭೂತ ಸೌಕರ್ಯಗಳ ಒದಗಿಸುವಂತೆ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಲಾಯಿತು.

Leave a Reply

Your email address will not be published. Required fields are marked *