September 10, 2025
sathvikanudi - ch tech giant

ಗುರಾಯಿಸಿದ್ದನ್ನು ಪ್ರಶ್ನಿಸಿದ ಕಾರಣಕ್ಕೆ ಚಾಕುವಿನಿಂದ ಇರಿತ……!

Spread the love

ಬೆಂಗಳೂರು

ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಯ್ಸಳ ನಗರದ 3ನೇ ಮುಖ್ಯರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ನಡೆದ ಘಟನೆಯಲ್ಲಿ, ಗುರಾಯಿಸಿದ್ದನ್ನು ಪ್ರಶ್ನಿಸಿದ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆಗೈದಿದ್ದಾರೆ. ಹತ್ಯೆಯಾದ ಯುವಕನ ಹೆಸರು ಮನೋಜ್ (22) ಎಂದು ಗುರುತಿಸಲಾಗಿದೆ. ಈ ಘಟನೆ ಆಗಲು ಹಿನ್ನಲೆಯಲ್ಲಿ, ಮನೋಜ್ ತನ್ನ ಸ್ನೇಹಿತ ಆ್ಯಂಟನಿಯೊಂದಿಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ, ಎದುರಿನಿಂದ ಬಂದ ಆರೋಪಿಗಳ ಗುಂಪೊಂದು ಮನೋಜ್‌ನನ್ನು ಗುರಾಯಿಸಿದೆ. ಈ ವಿಚಾರವಾಗಿ ಮನೋಜ್ ಮತ್ತು ಆ ಗುಂಪಿನವರ ನಡುವೆ ವಾಗ್ವಾದ ನಡೆದಿದ್ದು, ಅದು ಜಗಳವಾಗಿ ಪರಿವರ್ತನೆಗೊಂಡಿತು.

ಜಗಳದ ತೀವ್ರತೆ ಹೆಚ್ಚಾದಾಗ, ಗುಂಪಿನವರು ಚಾಕುವಿನಿಂದ ಮನೋಜ್ ಮೇಲೆ ದಾಳಿ ಮಾಡಿ ಹತ್ಯೆಗೈದಿದ್ದಾರೆ. ಈ ಘಟನೆಯ ನಂತರ, ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ದೋಷಿಗಳನ್ನು ಹಿಡಿಯಲು ಪೊಲೀಸರು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಇದು ಇಡೀ ಸ್ಥಳದಲ್ಲಿ ಆತಂಕ ಹುಟ್ಟಿಸಿದೆ.

ಈ ಘಟನೆ ಪೊಲೀಸರ ಗಮನಕ್ಕೆ ಬಂದಿದ್ದು, ಪ್ರಕರಣದ ತನಿಖೆ ಪ್ರಾರಂಭವಾಗಿದೆ. ಈ ಹತ್ಯೆಯ ಹಿಂದಿನ ನಿಜವಾದ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಸಾಕಷ್ಟು ಪ್ರಯತ್ನಿಸುತ್ತಿದ್ದಾರೆ.

WhatsApp Image 2025-06-21 at 19.57.59
Trending Now