March 3, 2026
Spread the love



ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಅಧಿಕಾರದಿಂದ ಕೆಳಗಿಳಿಯುವವರೆಗೂ ಶೂ ಧರಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಘೋಷಿಸಿದ್ದಾರೆ. ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಮಿಳುನಾಡು ಪೊಲೀಸರು ಸಂತ್ರಸ್ತೆಯ ಹೆಸರು, ಫೋನ್ ಸಂಖ್ಯೆ ಮತ್ತು ಇತರ ವೈಯಕ್ತಿಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಕ್ಕೆ ಅಣ್ಣಾಮಲೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಗೆ ತೀವ್ರ ಪ್ರತಿಸ್ಪಂದನೆ ಸೂಚಿಸಿದ ಅವರು, ಡಿಎಂಕೆ ಸರ್ಕಾರದ ವಿರುದ್ಧ ಕಠಿಣ ಹೋರಾಟ ನಡೆಸುವುದಾಗಿ ಸ್ಪಷ್ಟಪಡಿಸಿದ್ದಾರೆ. “ನಾನು ನನ್ನ ಮನೆಯ ಮುಂದೆ ಆರು ಬಾರಿ ಚಾಟಿಯೇಟು ಹೊಡೆದುಕೊಂಡು, ಇಂತಹ ಕ್ರಮಗಳನ್ನು ವಿರೋಧಿಸುವುದಾಗಿ ಮತ್ತು ಸರ್ಕಾರದ ವಿರುದ್ಧ ಹೋರಾಡುವುದಾಗಿ ನಿಶ್ಚಯಿಸಿದ್ದೇನೆ,” ಎಂದು ಹೇಳಿದ್ದಾರೆ.

ಅವರ ಈ ಘೋಷಣೆ ತಮಿಳುನಾಡು ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಡಿಎಂಕೆ ಸರ್ಕಾರದ ವಿರುದ್ಧ ಕಿಡಿಕಾರುತ್ತಿರುವ ಅಣ್ಣಾಮಲೈ ಅವರ ಹೆಜ್ಜೆಗಳು ರಾಜ್ಯ ರಾಜಕೀಯದಲ್ಲಿ ಹೊಸ ಬಿರುಗಾಳಿಗೆ ಎಡೆಮಾಡಿಕೊಡುತ್ತವೆ ಎಂಬ ಅಂದಾಜು ಮಾಡಲಾಗಿದೆ.

Leave a Reply

Your email address will not be published. Required fields are marked *