
ಉಡುಪಿ ಜಿಲ್ಲೆ:
ಮಲ್ಪೆ ಬಂದರಿಯಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ವಿಜಯನಗರ ಮೂಲದ ಮಹಿಳೆ ಮೀನು ಕಳ್ಳತನ ಮಾಡಿದ್ದಾಳೆ ಎಂಬ ಆರೋಪದ ಮೇಲೆ ಮಲ್ಪೆ ಪ್ರದೇಶದ ಕೆಲವರು ಆಕೆಯ ಮೇಲೆ ದೌರ್ಜನ್ಯ ಎಸಗಿದ್ದಾರೆ. ಮಾರ್ಚ್ 18 ರಂದು ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪೀಡಿತ ಮಹಿಳೆ ನೀಡಿದ ದೂರಿನ ಮೇರೆಗೆ, ಸ್ಥಳೀಯ ಲಕ್ಷ್ಮಿ ಬಾಯಿ, ಸುಂದರ್, ಶಿಲ್ಪಾ ಮತ್ತು ಮತ್ತೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಅವಮಾನ ಮಾಡಿದ ಬಗ್ಗೆ ಆದರಗಳು ಲಭಿಸಿದ್ದು, ಪೊಲೀಸರು ಅವರನ್ನು ಕೂಡಲೇ ಬಂಧಿಸಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅರುಣ್ ಕುಮಾರ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ದಲಿತ ಮಹಿಳೆಯ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. “ಹೆಣ್ಣುಮಕ್ಕಳಿಗೆ ಹಾಗೂ ಸಮಾಜದ ಯಾವುದೇ ವರ್ಗದವರಿಗೂ ಅನ್ಯಾಯವಾಗಲು ಬಿಡುವುದಿಲ್ಲ. ತಪ್ಪಿತಸ್ಥರು ಕಾನೂನಿನ ಪ್ರಕ್ರಿಯೆಯ ಮೂಲಕ ಶಿಕ್ಷೆ ಅನುಭವಿಸಬೇಕು,” ಎಂದು ಅವರು ತಿಳಿಸಿದ್ದಾರೆ.
ಈ ಘಟನೆಗೆ ಮಲ್ಪೆ ಮತ್ತು ಸುತ್ತಮುತ್ತಲಿನ ಪ್ರದೇಶದ ನಾಗರಿಕರಿಂದ ಭಾರಿ ಖಂಡನೆ ವ್ಯಕ್ತವಾಗಿದ್ದು, ದೌರ್ಜನ್ಯ ಎಸಗಿದವರ ವಿರುದ್ಧ ಕಠಿಣ ಶಿಕ್ಷೆ ಆಗಬೇಕೆಂದು ಒತ್ತಾಯಿಸಲಾಗಿದೆ. ಪೊಲೀಸ್ ಇಲಾಖೆ ಕೂಡ ಹೆಚ್ಚಿನ ತನಿಖೆ ನಡೆಸಿ, ಇಂತಹ ಘಟನೆಗಳು ಪುನರಾವೃತ್ತಿಯಾಗದಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ.
ಘಟನೆ ನಡೆದ ಸ್ಥಳದಲ್ಲಿ ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರು, ಸುತ್ತಮುತ್ತಲಿನ ದೃಶ್ಯ ಸಂಗ್ರಹಿಸಿ ಸಾಕ್ಷ್ಯಗಳನ್ನು ಸಂಪಾದಿಸಿದ್ದಾರೆ. ಮಹಿಳೆಗೆ ಅಗತ್ಯ ವೈದ್ಯಕೀಯ ನೆರವು ಒದಗಿಸಲಾಗಿದ್ದು, ಆಕೆಯ ಸುರಕ್ಷತೆಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಈ ಘಟನೆಯು, ದಲಿತ ಸಮುದಾಯ ಹಾಗೂ ಮಹಿಳಾ ಹಕ್ಕುಗಳ ಪರ ಹೋರಾಟಗಾರರ ಕಣ್ಣೀರಾಗಿದ್ದು, ಸಮಾನತೆ ಮತ್ತು ಮಾನವೀಯತೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಪ್ರಾಮಾಣಿಕ ಕ್ರಮಗಳನ್ನು ಸಾರ್ವಜನಿಕರು ಹರ್ಷಿಸಿದ್ದಾರೆ. ಈ ಪ್ರಕರಣವು ತೀಕ್ಷ್ಣ ಕುತೂಹಲ ಮೂಡಿಸಿರುವುದರಿಂದ, ಪೊಲೀಸರು ಶೀಘ್ರದಲ್ಲಿ ಇನ್ನಷ್ಟು ಮಾಹಿತಿ ಬಹಿರಂಗಪಡಿಸುವ ಸಾಧ್ಯತೆಯಿದೆ.
ವರದಿ :ಆರತಿ ಗಿಳಿಯಾರ್
ಉಡುಪಿ ಜಿಲ್ಲೆ