December 12, 2025
Breaking News

ಶಾಲೆಯಲ್ಲಿ ಅಮಾನವೀಯ ಘಟನೆ: ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಶಿಕ್ಷಕಿ..!?

Spread the love



ಬೆಂಗಳೂರು: ರಾಜ್ಯದಲ್ಲಿ ಶಾಲೆಯೊಳಗಿನ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ನಗರದ ಅತ್ತಿಗುಪ್ಪೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸುವಂತೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಶಾಲೆಯ ಮುಖ್ಯ ಶಿಕ್ಷಕಿ ವಿದ್ಯಾರ್ಥಿಗಳಿಗೆ ಶೌಚಾಲಯ ಶುದ್ಧಗೊಳಿಸುವಂತೆ  ಆದೇಶಿಸಿದ್ದಾರೆಯೇ ಎಂಬ ವಿಷಯ ಇದೀಗ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೋಷಕರು ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದ್ದು, ಶಿಕ್ಷಕಿ ವಿರುದ್ಧ ಕ್ರಮಕೈಗೊಳ್ಳುವಂತೆ ಶಾಲಾ ಆಡಳಿತ ಮತ್ತು ಶಿಕ್ಷಣ ಇಲಾಖೆ ಮುಂದೆ ಮನವಿ ಸಲ್ಲಿಸಿದ್ದಾರೆ.

ಸ್ಥಳೀಯರು ಈ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, “ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಲು ಶಾಲೆಗೆ ಬರುತ್ತಾರೆ. ಅವರಿಗೆ ಈ ರೀತಿಯ ಕೆಲಸ ಮಾಡಲು ಒತ್ತಾಯಿಸುವುದು ಅತ್ಯಂತ ದುಃಖದ ಸಂಗತಿ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ತನಿಖೆಗೆ ಮುಂದಾಗಿದ್ದು, ಶಾಲೆಯ ಆಡಳಿತ ಮಂಡಳಿಯ ಪ್ರತಿಕ್ರಿಯೆ ನಿರೀಕ್ಷಿಸಲಾಗುತ್ತಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಇಂತಹ ಘಟನೆಗಳು ಪುನರಾವೃತ್ತಿಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂಬುದು ಪೋಷಕರ ಮತ್ತು ಸಾರ್ವಜನಿಕರ ಒತ್ತಾಯವಾಗಿದೆ.

WhatsApp Image 2025-06-21 at 19.57.59