September 9, 2025
sathvikanudi - ch tech giant

ಮಂಡ್ಯಜಿಲ್ಲೆಯ ಅಂಧತ್ವ ನಿಯಂತ್ರಣ ಸಂಸ್ಥೆ ಮತ್ತು ಮೈಸೂರು ರೇಸ್ ಕ್ಲಬ್ ಚಾರಿಟೇಬಲ್ ಟ್ರಸ್ಟ್ ಉಚಿತ ಕಣ್ಣಿನ ಪೊರೆ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಶಿಬಿರ.!

Spread the love

ಮಂಡ್ಯ :

ಜಿಲ್ಲೆಯ ಅಂಧತ್ವ ನಿಯಂತ್ರಣ ಸಂಸ್ಥೆ ಮತ್ತು ಮೈಸೂರು ರೇಸ್ ಕ್ಲಬ್ ಚಾರಿಟೇಬಲ್ ಟ್ರಸ್ಟ್ ಕಣ್ಣಿನ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿದೆ. ಈ ಶಿಬಿರದಲ್ಲಿ ಉಚಿತ ಲೆನ್ಸ್ (ಮಸೂರ) ಅಳವಡಿಸುವ ಸೌಲಭ್ಯವಿದೆ.

ಶಿಬಿರವನ್ನು 2025ರ ಏಪ್ರಿಲ್ 17ನೇ ಗುರುವಾರ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಕಣ್ಣಿನ ಸಮಸ್ಯೆಗಳನ್ನು ಹೊಂದಿರುವ ಸಾರ್ವಜನಿಕರು ಈ ಸದುಪಾಯವನ್ನು ತಪ್ಪದೆ ಬಳಸಿಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಶಿಬಿರಾರ್ಥಿಗಳಿಗೆ ಪ್ರಮುಖ ಸೂಚನೆಗಳು:

  1. ತಪಾಸಣೆಗೆ ಬರುವವರು ತಮ್ಮ ಪೂರ್ಣ ಹೆಸರು, ವಿಳಾಸ ಹಾಗೂ ಸಂಪರ್ಕ ಸಂಖ್ಯೆಯನ್ನು ಬಿಳಿ ಕಾಗದದಲ್ಲಿ ಸ್ಪಷ್ಟವಾಗಿ ಬರೆದು ತರಬೇಕು.
  2. ಶಸ್ತ್ರ ಚಿಕಿತ್ಸೆ ಅಗತ್ಯವಿರುವವರು ಮರುದಿನ ಮೈಸೂರಿನ ಎಂ.ಆರ್.ಸಿ. ಆಸ್ಪತ್ರೆಯಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆ ಪಡೆಯಬಹುದು. ಚಿಕಿತ್ಸೆಯ ನಂತರ ಉಚಿತ ಕನ್ನಡಕವನ್ನೂ ನೀಡಲಾಗುತ್ತದೆ.
  3. ಶಿಬಿರದ ದಿನ ಸ್ನಾನ ಮಾಡಿ ಶುದ್ಧವಾದ ಬಟ್ಟೆ ಧರಿಸಿ ಬರುವಂತೆ ವಿನಂತಿಸಲಾಗಿದೆ. ಊಟದ ವ್ಯವಸ್ಥೆಯೂ ಮಾಡಲಾಗಿದೆ.
  4. ಶಿಬಿರದಲ್ಲಿ ಭಾಗವಹಿಸುವವರು ಆಧಾರ್ ಕಾರ್ಡ್, ಬಿಪಿಎಲ್ ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪಾನ್ ಕಾರ್ಡ್ ಇತ್ಯಾದಿಗಳ ಜೆರಾಕ್ಸ್ ಪ್ರತಿಗಳನ್ನು ತರಬೇಕು.
  5. ಹೃದಯ ಕಾಯಿಲೆ, ಬಿಪಿ, ಅಸ್ತಮಾ, ಸಕ್ಕರೆ ಕಾಯಿಲೆ ಇರುವವರು ಶಸ್ತ್ರಚಿಕಿತ್ಸೆಗೆ ಯಾವುದೇ ಅಡಚಣೆ ಇಲ್ಲ ಎಂಬ ವೈದ್ಯರ ಪ್ರಮಾಣಪತ್ರವೊಂದನ್ನು ತರಬೇಕಾಗುತ್ತದೆ.

ಸಂಬಂಧಿಸಿದವರು ಹೆಚ್ಚಿನ ಮಾಹಿತಿಗಾಗಿ : 0821-2472102 ಅಥವಾ 9945216163 ಸಂಖ್ಯೆಗೆ ಸಂಪರ್ಕಿಸಬಹುದು.
ಸಾರ್ವಜನಿಕರು ಈ ಸದಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂಬುದು ಆಯೋಜಕರ ಕೋರಿಕೆ.

WhatsApp Image 2025-06-21 at 19.57.59
Trending Now