September 9, 2025
sathvikanudi - ch tech giant

ಸಿರಾ: ಕಾರ್ಯನಿರತ ಪತ್ರಕರ್ತರ ಸಂಘದ ನೂತನ ತಾಲೂಕು ಘಟಕ ಸ್ಥಾಪನೆ — ನೂತನ ಪದಾಧಿಕಾರಿಗಳ ಆಯ್ಕೆ!

Spread the love


ಬೆಂಗಳೂರು, ಜುಲೈ 10:
ಇಂದು ಸಿರಾ ಪಟ್ಟಣದಲ್ಲಿ ಕಾರ್ಯನಿರತ ಪತ್ರಕರ್ತರ ಸಂಪಾದಕರ ಹಾಗೂ ವರದಿಗಾರರ ಸಂಘದ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಗಂಭೀರವಾಗಿ ಹಾಗೂ ಸೌಹಾರ್ದಪೂರ್ಣ ವಾತಾವರಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ವಿವಿಧ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಪತ್ರಕರ್ತರು ಹಾಗೂ ಸಂಘದ ರಾಜ್ಯ ಮಟ್ಟದ ಪ್ರಮುಖ ನಾಯಕರು ಪಾಲ್ಗೊಂಡಿದ್ದರು.



ಈ ಆಯ್ಕೆ ಸಭೆಗೆ ಸಂಘದ ರಾಜ್ಯಾಧ್ಯಕ್ಷ ಶಶಿಕಾಂತ್ ಕಾಂಬಳೆ, ಅವರು ಅಧ್ಯಕ್ಷತೆ ವಹಿಸಿ ಮಾರ್ಗದರ್ಶನ ನೀಡಿದರು. ಸಂಘಟನಾ ಸಂಚಾಲಕರಾದ ಶ್ರೀಮತಿ ಯಶಸ್ವಿನಿ, ಹಾಗೂ ಸಲಹಾ ಸಮಿತಿಯ ಅಧ್ಯಕ್ಷರಾದ ಸಂಜಯ್ ಸಾವಂತ್ , ಹಾಗೂ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾದ ವಿಜಯ್ ಮುನಿಯಪ್ಪ, ವಿಶೇಷ ಅತಿಥಿಗಳಾಗಿ ಸಭೆಯಲ್ಲಿ ಉಪಸ್ಥಿತರಿದ್ದರು.



ಕಾರ್ಯಕ್ರಮದ ಆರಂಭದಲ್ಲಿ ಕನ್ನಡ ತಾಯಿಗೆ ಪೂಜೆ ಸಲ್ಲಿಸಿ, ರಾಷ್ಟ್ರೀಯ ಗೀತೆಯಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಸಂಘದ ರಾಜ್ಯಾಧ್ಯಕ್ಷರು ಮಾತನಾಡುತ್ತಾ, “ಗ್ರಾಮಮಟ್ಟದಿಂದ ರಾಜ್ಯಮಟ್ಟದ ತನಕ ಕಾರ್ಯನಿರತ ಪತ್ರಕರ್ತರು ತಮ್ಮ ಧೈರ್ಯ, ಬದ್ಧತೆ ಹಾಗೂ ನಿಷ್ಠೆಯಿಂದ ಸಮಾಜಕ್ಕೆ ಮಹತ್ತರ ಸೇವೆ ಸಲ್ಲಿಸುತ್ತಿದ್ದಾರೆ. ಈ ಸಂಘಟನೆಯ ಉದ್ದೇಶವೇ ಅವರ ಹಕ್ಕುಗಳ ರಕ್ಷಣೆಯೊಂದಿಗೆ ಸಮಾನ ವೇದಿಕೆಯನ್ನು ಒದಗಿಸುವುದು,” ಎಂದು ಹೇಳಿದರು.

ಶಿರಾ ತಾಲೂಕು ಘಟಕದ ಅಧ್ಯಕ್ಷರಾಗಿ ಶ್ರೀ ನೂತನ ಅಧ್ಯಕ್ಷರನ್ನಾಗಿ ನವೀನ್ ಕುಮಾರ್ ಅವರನ್ನ ಆಯ್ಕೆ ಮಾಡಲಾಗಿದ್ದು, ಜೊತೆಗೆ ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ವಿವಿಧ ಸಮಿತಿಗಳ ಸದಸ್ಯರನ್ನು ಸಹ ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು. ಎಲ್ಲಾ ಆಯ್ಕೆ ಪ್ರಕ್ರಿಯೆ ನಿಗದಿತ ವಿಧಾನಾನುಸಾರ ಜರುಗಿತು.

ಪತ್ರಕರ್ತರ ಸಂಘದ ಹೊಸ ಘಟಕದ ಸ್ಥಾಪನೆಯು ಸ್ಥಳೀಯ ಪತ್ರಕರ್ತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ, ಸಮಾಲೋಚನೆ ಮತ್ತು ಸಹಕಾರದ ವೇದಿಕೆಯಾಗಿ ರೂಪುಗೊಳ್ಳಲಿದೆ ಎಂಬ ಭರವಸೆ ವ್ಯಕ್ತವಾಯಿತು. ಸಭೆಯ ಅಂತಿಮ ಘಟ್ಟದಲ್ಲಿ ನೂತನ ಅಧ್ಯಕ್ಷರು ತಮ್ಮ ಭಾಷಣದ ಮೂಲಕ ಧನ್ಯವಾದ ಸಲ್ಲಿಸಿ, “ಈ ಪದವಿ ನನ್ನ ಪಾಲಿಗೆ ಜವಾಬ್ದಾರಿಯ ಸಂಕೇತವಾಗಿದೆ. ಸಮಾನತೆ, ಗೌಪ್ಯತೆ ಮತ್ತು ಶಿಸ್ತುಪೂರ್ಣತೆಯಿಂದ ಸಂಘವನ್ನು ಮುನ್ನಡೆಸುತ್ತೇನೆ,” ಎಂದು ಹೇಳಿದರು.✍🏻✍🏻✍🏻

WhatsApp Image 2025-06-21 at 19.57.59
Trending Now